HomeSports NewsWPL 2026: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ RCB: ಸಿಂಹಿಣಿಯರಿಗೆ ಹಣದ ಸುರಿಮಳೆ! ಡೆಲ್ಲಿಗೂ ಭರ್ಜರಿ ಬಹುಮಾನ

WPL 2026: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ RCB: ಸಿಂಹಿಣಿಯರಿಗೆ ಹಣದ ಸುರಿಮಳೆ! ಡೆಲ್ಲಿಗೂ ಭರ್ಜರಿ ಬಹುಮಾನ

For Dai;y Updates Join Our whatsapp Group

Spread the love

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿ ಎರಡನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಸತತ ನಾಲ್ಕನೇ ಬಾರಿ ಫೈನಲ್ ತಲುಪಿದ್ದ ಡೆಲ್ಲಿ ತಂಡಕ್ಕೆ ಈ ಬಾರಿ ಕೂಡ ಟ್ರೋಫಿ ಕೈ ತಪ್ಪಿದ್ದು, ರನ್ನರ್‌-ಅಪ್ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 203 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ RCB ತಂಡ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವಾಲ್ ಅವರ ಸ್ಫೋಟಕ ಇನ್ನಿಂಗ್ಸ್‌ಗಳ ನೆರವಿನಿಂದ ಕೊನೆಯ ಓವರ್‌ನಲ್ಲಿ ಗೆಲುವು ಸಾಧಿಸಿತು.

ಈ ಜಯದೊಂದಿಗೆ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಋತುವಿನಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದು 12 ಅಂಕಗಳೊಂದಿಗೆ ಶ್ರೇಷ್ಠ ಸಾಧನೆ ಮಾಡಿದ ತಂಡವಾಗಿ ಹೊರಹೊಮ್ಮಿತು.

ಜೆಮಿಮಾ ರೋಡ್ರಿಗಸ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಂಟು ಪಂದ್ಯಗಳಲ್ಲಿ ನಾಲ್ಕು ಜಯ ಹಾಗೂ ನಾಲ್ಕು ಸೋಲುಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿತ್ತು. ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಡೆಲ್ಲಿ ಫೈನಲ್‌ಗೆ ಅರ್ಹತೆ ಪಡೆದಿದ್ದರೂ, ಅಂತಿಮ ಪಂದ್ಯದಲ್ಲಿ ಸೋಲು ಕಂಡಿತು.

ಮಹಿಳಾ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿ 2023ರಲ್ಲಿ ನಡೆದಿದ್ದು, ಅದರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. ಅಂದು ನೀಡಿದಂತೆ ಈ ಬಾರಿಯೂ ವಿಜೇತ ತಂಡಕ್ಕೆ ₹6 ಕೋಟಿ ಬಹುಮಾನ ನಿಗದಿಪಡಿಸಲಾಗಿತ್ತು. ಚಾಂಪಿಯನ್ RCB ತಂಡವು ₹6 ಕೋಟಿ ಮೊತ್ತವನ್ನು ಪಡೆದುಕೊಂಡಿತು. ರನ್ನರ್‌-ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ₹3 ಕೋಟಿ ಬಹುಮಾನ ಲಭಿಸಿತು.

ಪಂದ್ಯಾವಳಿಯ ಅತ್ಯುತ್ತಮ ಆಟಗಾರಿಗೆ ₹5 ಲಕ್ಷ ಬಹುಮಾನ ನೀಡಲಾಯಿತು. ಆರೆಂಜ್ ಕ್ಯಾಪ್‌, ಪರ್ಪಲ್ ಕ್ಯಾಪ್‌, ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಆಟಗಾರ್ತಿ ಹಾಗೂ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ ಆಟಗಾರ್ತಿಗೂ ತಲಾ ₹5 ಲಕ್ಷ ಬಹುಮಾನ ನೀಡಲಾಯಿತು. ಫೈನಲ್ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್‌ ಆಡಿದ ಸ್ಮೃತಿ ಮಂಧಾನ ಅವರಿಗೆ ₹2.5 ಲಕ್ಷ ವಿಶೇಷ ಬಹುಮಾನ ಲಭಿಸಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!