ಸಾಹಿತಿ ಡಾ. ರಾಜೇಂದ್ರ ಗಡಾದರಿಗೆ ವಿಶ್ವೇಶ್ವರಯ್ಯ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿಯ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ, ಮಕ್ಕಳ ಸಾಹಿತಿ, ಸಂಶೋಧಕ, ಕವಿ, ಹಿರಿಯ ಲೇಖಕ ಡಾ. ರಾಜೇಂದ್ರ ಎಸ್. ಗಡಾದ ಅವರಿಗೆ ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನೀಡುವ 2025ನೇ ಸಾಲಿನ ಪ್ರತಿಷ್ಠಿತ ವಿಶ್ವೇಶ್ವರಯ್ಯ ಅಂತರಾಷ್ಟ್ರೀಯ ಪ್ರಶಸ್ತಿ ಸಂದಿದೆ.

Advertisement

ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕವಿ, ಸಾಹಿತಿ ಡಾ. ಸಿ. ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಾಹಿತಿ ಡಾ. ರಾಜೇಂದ್ರ ಗಡಾದರಿಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು, ಮಾಜಿ ಲೋಕಾಯುಕ್ತ ಡಾ. ಎನ್. ಸಂತೋಷ ಹೆಗಡೆಯವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಸಿ. ನಂಜಯ್ಯನಮಠ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಂ. ಎಸ್. ಮುತ್ತುರಾಜ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಹಿರಿಯ ಚಲನಚಿತ್ರ ಕಲಾವಿದರಾದ ಶಂಕರ್ ಭಟ್, ಗಣೇಶರಾವ್ ಕೇಸರ್‌ಕರ್, ಮೀನಾ, ಅಥಣಿ ಮೋಟಗಿಮಠದ ಡಾ. ಪ್ರಭುಚನ್ನಬಸವ ಮಹಾಸ್ವಾಮಿಗಳು, ಚಪ್ಪಲಕಟ್ಟಿ ಹಿರೇಮಠದ ಡಾ. ಕಲ್ಮೇಶ್ವರ ಮಹಾಸ್ವಾಮಿಗಳು, ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ಅಧ್ಯಕ್ಷ, ಪತ್ರಕರ್ತ, ಚಲನಚಿತ್ರ ನಿರ್ದೇಶಕ ರಮೇಶ್ ಸುರ್ವೆ ಹಾಜರಿದ್ದರು.

ಪ್ರಶಸ್ತಿಗೆ ಭಾಜನರಾದ ಡಾ. ರಾಜೇಂದ್ರ ಗಡಾದರನ್ನು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ವಚನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು, ಜಿಲ್ಲಾ ಸಿರಿಗನ್ನಡ ವೇದಿಕೆ, ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಅಡವೀಂದ್ರ ಸ್ವಾಮಿಮಠದ ಶಿವಾನುಭವ ಸಮಿತಿ, ಕನ್ನಡ ಜಾಗೃತಿ ವೇದಿಕೆ, ಸಂಗಮ ಪ್ರಕಾಶನ ವೇದಿಕೆ ಮುಂತಾದ ಸಂಘಟನೆಗಳು ಅಭಿನಂದಿಸಿವೆ.


Spread the love

LEAVE A REPLY

Please enter your comment!
Please enter your name here