ರಹಸ್ಯವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿಯಾದ ಯತೀಂದ್ರ ಸಿದ್ದರಾಮಯ್ಯ!

0
Spread the love

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಜೈಲಿನಲ್ಲಿ ವೀರೇಂದ್ರ ಪಪ್ಪಿ ಮತ್ತು ವಿನಯ್ ಕುಲಕರ್ಣಿ ರನ್ನು ಭೇಟಿ ಮಾಡಿದ್ದರು. ಈ ಭೇಟಿ ರಾಜಕೀಯದಲ್ಲಿ ಹೊಸ ತಿರುವು ಸೃಷ್ಟಿಸಿತ್ತು. ಇದಕ್ಕೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ರಾಜಕೀಯ ಅಖಾಡಕ್ಕೆ ಇಳಿದಿರುವುದು ಗಮನ ಸೆಳೆದಿದೆ.

Advertisement

ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯರನ್ನು ಯತೀಂದ್ರ ಸಿದ್ದರಾಮಯ್ಯ ರಹಸ್ಯವಾಗಿ ಭೇಟಿಯಾದ ವಿಚಾರ ಇದೀಗ ಕುತೂಹಲ ಮೂಡಿಸಿದೆ. ಈ ಭೇಟಿ ನಂಬರ್ ಗೇಮ್ನ ಭಾಗವೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಹುಬ್ಬಳ್ಳಿಯ ಸಂತೋಷ ನಗರದಲ್ಲಿರುವ ಪ್ರಸಾದ್‌ ಅಬ್ಬಯ್ಯ ನಿವಾಸಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಅಬ್ಯಯ್ಯ, ಸಹಿ ಸಂಗ್ರಹಕ್ಕೆ ನನಗೆ ಯಾವುದೇ ಕರೆ ಬಂದಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ. ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್ ಚಿಂತಿಸಿಲ್ಲ ಎಂದು ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here