ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ.ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಹೇಳಿದರು.
ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ.ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ದರು. ಯತ್ನಾಳ ಅವರ ಮನಸ್ಸು ಸ್ಥಿರವಾಗಿಲ್ಲ. ಅವರ ಪಕ್ಷದ ವಿರುದ್ದವೇ ಯತ್ನಾಳ ಅವರು ಮನಸ್ಸಿಗೆ ಬಂದ ಹಾಗೆ ಮಾತನಾಡುತ್ತಾರೆ. ಐಎಸ್ಐ ಉಗ್ರರ ಜೊತೆಗೆ ನಂಟು ಇದ್ದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸತ್ಯಕ್ಕೆ ದೂರವಾದದ್ದು, ನಾನು ಖಂಡಿಸುತ್ತೆನೆ ಎಂದರು.
ಅವರಿಗೆ ಒಳ್ಳೆ ಬುದ್ಧಿ ಕೊಡಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡ್ತೇನಿ. ರಾಜಕೀಯವಾಗಿ ಮಾತನಾಡಲಿ, ಆದರೆ ಧಾರ್ಮಿಕವಾಗಿ ಮಾತನಾಡೋದು ಸರಿಯಲ್ಲ. ಅಲ್ಲಿ ಅನೇಕ ಗುರುಗಳು ಬಂದು ಎಲ್ಲಾ ಧರ್ಮಗಳಲ್ಲಿ ಶಾಂತಿ ನೆಲೆಸಬೇಕು ಅನ್ನೋ ಉದ್ದೇಶದಿಂದ ಮಾಡಿದ್ವಿ. ನಮ್ಮಲ್ಲಿ ಶೈಕ್ಷಣಿಕವಾಗಿ ಅಲ್ಪಸಂಖ್ಯಾತರೂ ಹಿಂದುಳಿದಿದ್ದಾರೆ. ಯಾರೇ ಆಗಲಿ ಧಾರ್ಮಿಕವಾಗಿ ಮಾತನಾಡಬಾರದು ಎಂದು ಅವರು ಹೇಳಿದರು.