ಯಲಹಂಕ ಪೊಲೀಸರ ಕಾರ್ಯಾಚರಣೆ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್.!‌

0
Spread the love

ಬೆಂಗಳೂರು: ಶ್ಯಾಮರಾಜಪುರದಲ್ಲಿರುವ  ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲಹಂಕ ನ್ಯೂಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಸಂಜಯ್ ಬಂಧಿತ ಆರೋಪಿಯಾಗಿದ್ದು, ಮಾರ್ಚ್​ 5ರಂದು ದೇಗುಲದ ಬೆಳ್ಳಿ ತಟ್ಟೆ, 15 ಬೆಳ್ಳಿ ಬಟ್ಟಲು, ಬೆಳ್ಳಿ ಹಸುವಿನ ವಿಗ್ರಹ, 4 ತಾಳಿ, ಕಾಸಿನ ಸರವನ್ನು ಆರೋಪಿ ಕದ್ದಿದ್ದನು. ಸಂಜಯ್ ವಿರುದ್ಧ ಈ ಹಿಂದೆ ಮೂರು ಪ್ರಕರಣ ದಾಖಲಾಗಿದ್ದವು.

ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿರುತ್ತೆ. ವಕೀಲರಿಗೆ ಕೊಡಲು ಹಣ ಇರಲಿಲ್ಲ ಎಂದು ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದನು. ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here