ವಿಧಾನಸೌಧದ ಎದುರು ಯೋಗ ಪ್ರದರ್ಶನ: ಯೋಗ ಮಾಡಿ ನಿರೋಗಿ ಆಗಿ ಎಂದ ರಾಜ್ಯಪಾಲರು!

0
Spread the love

ಬೆಂಗಳೂರು :- ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಾವಿರಾರು ಯೋಗಪಟುಗಳಿಂದ ಯೋಗಭಾಸ್ಯ ನಡೆಯಿತು. ಆಯುಷ್ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಅನಿರುದ್ಧ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ನಟಿ ಸಾನ್ಯ ಅಯ್ಯರ್, ನಟ ಶೈನ್ ಶೆಟ್ಟಿ ಭಾಗಿಯಾಗಿ ವಿವಿಧ ಆಸನಗಳನ್ನ ಪ್ರದರ್ಶಿಸಿದರು.

Advertisement

ʻಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗʼ ಎನ್ನುವ ಧ್ಯೇಯವಾಕ್ಯ ಸಾಕಾರಗೊಳಿಸುವ ನಿಟ್ಟಿನಲ್ಲಿ ಬೆಳಗ್ಗೆ 6 ಗಂಟೆಯಿಂದ ಶುರುವಾಗಿ 8:30ರ ವರೆಗೆ ಯೋಗ ಪ್ರದರ್ಶನ ನಡೆಯಿತು. ಹಿರಿಯ ರಾಜಕೀಯ ನಾಯಕರೂ ಸೇರಿ ವಿವಿಧ ಸಂಸ್ಥೆಯ ಯೋಗಪಟುಗಳು ಇದರಲ್ಲಿ ಪಾಲ್ಗೊಂಡಿದ್ದರು. ಬಳಿಕ ಯೋಗ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಕನ್ನಡದಲ್ಲಿ ಎಲ್ಲರಿಗೂ ಸ್ವಾಗತ ಕೋರಿ ಭಾಷಣ ಶುರು ಮಾಡಿದರು.

ಯೋಗ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ಯೋಗ ಎಲ್ಲರ ಕಲ್ಯಾಣ ಮಾಡೋ ಭಾವನೆ ಆಗಿದೆ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಯೋಗ ದಿನ ಉತ್ತಮವಾಗಿ ಆಚರಣೆ ‌ಮಾಡಿದೆ. ಸರ್ಕಾರಕ್ಕೆ ಧನ್ಯವಾದ ಹೇಳ್ತೀನಿ. ಯೋಗ ಜೀವನವನ್ನ ಪರಿಪೂರ್ಣ ಮಾಡುತ್ತದೆ. ʻಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗʼ ಅನ್ನೋ ಘೋಷ ವಾಕ್ಯ ಉತ್ತಮವಾಗಿದೆ ಎಂದರಲ್ಲದೇ ಯೋಗ ಮಾಡಿ ನಿರೋಗಿ ಆಗಿ ಎಂದು ಸಲಹೆ ನೀಡಿದರು.


Spread the love

LEAVE A REPLY

Please enter your comment!
Please enter your name here