ವಿಜಯಸಾಕ್ಷಿ ಸುದ್ದಿ, ಮುಳಗುಂದ: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದು ವಿಜಯಕುಮಾರ ನೀಲಗುಂದ ತಿಳಿಸಿದರು.
ಅವರು ಪಟ್ಟಣದ ಅಂಜುಮನ್ ಇಸ್ಲಾಂ ಪ್ರೌಢಶಾಲೆಯಲ್ಲಿ ಜರುಗಿದ 11ನೇ ಅತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಯೋಗದ ಮಹತ್ವ ತಿಳಿಸಿದರು.
ಯೋಗ ಶಿಕ್ಷಕ ಗಿರೀಶ್ ಫಿರಂಗಿ ಮಕ್ಕಳಿಗೆ ಯೋಗದ ವಿವಿಧ ಆಸನ ಮಾಡಿಸಿ ಅದರ ಮಹತ್ವ ತಿಳಿಸಿದರು. ಅಂಜುಮನ್ ಸಂಸ್ಥೆಯ ಅಧ್ಯಕ್ಷ ತಾಜುದ್ದೀನ ಕಿಂಡ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎ.ಡಿ. ಮುಜಾವರ, ಅಂಜುಮನ್ ಸಂಸ್ಥೆ ಕಾರ್ಯದರ್ಶಿ ಹೈದರಾಲಿ ಖವಾಸ, ಸದಸ್ಯ ದಾವೂದ ಜಮಾಲ್, ಮುಹಮ್ಮದ ಛಬ್ಬಿ ಸೇರಿದಂತೆ ಎಸ್ಡಿಎಂಸಿ ಸದಸ್ಯರು, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜಿನ ಶಿಕ್ಷಕವೃಂದದವರು ಭಾಗವಹಿಸಿದ್ದರು.