ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

0
Spread the love

ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಗಾಳಿಯಲ್ಲಿ ಗುಂಡು ಹೊಡೆಯೋ ಆರೋಪ ಅಲ್ಲ. ಅವರು ಯಾವಾಗ ಬಿಜೆಪಿ ಪರಿಷತ್ ಸ್ಥಾನಕ್ಕೆ ತರಾತುರಿಯಲ್ಲಿ ರಾಜೀನಾಮೆ ಕೊಟ್ರೋ ಆಗಲೇ ರಾಜಕೀಯ ವಿದ್ಯಮಾನಗಳ ಬೆಳವಣಿಗೆ ಬಗ್ಗೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುತ್ತಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವಿಲ್ಲ ಎಂದರು.

Advertisement

ಚನ್ನಪಟ್ಟಣಕ್ಕೆ ನನ್ನ ಹೆಸರು 2 ತಿಂಗಳಿಂದ ಚಾಲ್ತಿಯಲ್ಲಿದೆ. ಪಕ್ಷದ ಕಾರ್ಯಕರ್ತರು ನಿಖಿಲ್‌ಗೆ ಟಿಕೆಟ್ ಸಿಕ್ಕರೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು. ನಾನು ಸ್ಪರ್ಧೆ ಮಾಡೋದಕ್ಕೆ ಧೈರ್ಯದ ಪ್ರಶ್ನೆ ಅಲ್ಲ. ಯಾವುದೇ ಸ್ಪರ್ಧೆ ಅಂತಿಮವಾಗಬೇಕಾದರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕಿದೆ. ಕುಮಾರಸ್ವಾಮಿ ಅವರು ನಿನ್ನೆ ಹೇಳಿದ್ದಾರೆ.

ತಾಳಿದವನು ಬಾಳಿಯಾನು ಎಂದು ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇಷ್ಟು ದಿನ ಅತ್ಯಂತ ತಾಳ್ಮೆಯಿಂದ ನಾವು ಕಾದಿದ್ದೇವೆ. ಈಗಲೂ ಕೂಡಾ ಬಿಜೆಪಿ ರಾಜ್ಯದ ನಾಯಕರು ನಮ್ಮ ಪಕ್ಷದ ನಾಯಕರು ಕೂಡಿ ಚರ್ಚೆ ಮಾಡಿ ಯಾರು ಎನ್‌ಡಿಎ ಅಭ್ಯರ್ಥಿ ಆಗಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಭ್ಯರ್ಥಿ ಯಾರು ಅಂತ ಎನ್‌ಡಿಎ ಘೋಷಣೆ ಮಾಡುತ್ತದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here