ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು: ಸಿದ್ದರಾಮಯ್ಯ ಅಣಕಿಸಿದ ಕುಮಾರಸ್ವಾಮಿ!

0
Spread the love

ಬೆಂಗಳೂರು:- ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್​​ಬುಕ್​ನಲ್ಲಿ ವ್ಯಂಗ್ಯವಾಗಿ ಸಂದೇಶ ಪ್ರಕಟಿಸಿರುವ ಕುಮಾರಸ್ವಾಮಿ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ ಎಂದಿದ್ದಾರೆ.

ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮುಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ! Karma Hit back ಎಂದರೇ ಇದೇ ಅಲ್ಲವೇ Siddaramaiah ನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ಸಿದ್ದಾಪರಾಧ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.

ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ?’’ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here