ನೀವೇ ರಿಯಲ್ ಹೀರೋಗಳು: ‘ಆಪರೇಷನ್ ಸಿಂಧೂರ’ಕ್ಕೆ ಮೆಚ್ಚುಗೆ ಸೂಚಿಸಿದ ಮಮ್ಮುಟ್ಟಿ

0
Spread the love

ಭಾರತ ಸೇನೆಯ ‘ಆಪರೇಷನ್ ಸಿಂಧೂರ’ ಕಾರ್ಯಚರಣೆಯನ್ನು ಭಾರತದ ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಭಾರತೀಯ ಸೇನೆ ದಾಳಿ ನಡೆಸಿದ ದಾಳಿಯ ಬಗ್ಗೆ ರಜನಿಕಾಂತ್, ಮೋಹನ್ ಲಾಲ್ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ನಟ ಮಮ್ಮುಟ್ಟಿ ಕೂಡ ರಿಯಾಕ್ಟ್ ಮಾಡಿದ್ದು, ನೀವು ನಮ್ಮ ರಿಯಲ್ ಹೀರೋಗಳು ಅಂತ ವೀರ ಯೋಧರನ್ನ ಕೊಂಡಾಡಿದ್ದಾರೆ. 

Advertisement

‘ನಿಜವಾದ ವೀರ ಯೋಧರಿಗೆ ನಮ್ಮ ನಮನಗಳು… ಈ ರಾಷ್ಟ್ರ ಕರೆದಾಗ ಭಾರತೀಯ ಸೇನೆಯು ತಕ್ಕ ಉತ್ತರ ನೀಡುತ್ತದೆ ಅನ್ನೋದು ಆಪರೇಷನ್ ಸಿಂಧೂರದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ಜೀವಗಳನ್ನು ಉಳಿಸಿದ್ದಕ್ಕಾಗಿ ಮತ್ತು ಭರವಸೆಯನ್ನು ಮರುಸ್ಥಾಪಿಸಿದ್ದಕ್ಕಾಗಿ ಧನ್ಯವಾದಗಳು. ನೀವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ. ಜೈ ಹಿಂದ್!’ ಎಂದು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಮಮ್ಮುಟ್ಟಿ ಬರೆದುಕೊಂಡಿದ್ದಾರೆ.

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.


Spread the love

LEAVE A REPLY

Please enter your comment!
Please enter your name here