ಕಟ್ಟೆಗೆ ಬಿದ್ದು ಯುವಕ ಸಾವು: ಫೋಟೋಶೂಟ್ ಮಾಡಲು ಹೋಗಿ ದುರಂತ!

0
Spread the love

ಹಾಸನ:- ಕಟ್ಟೆಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ, ಹಾಲುವಾಗಿಲು ಗ್ರಾಮದಲ್ಲಿ ಜರುಗಿದೆ. ಫೋಟೋಶೂಟ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ.

Advertisement

ಮೃತಪಟ್ಟ ಯುವಕನನ್ನು ನಾಗೇಂದ್ರ ಎಂದು ಗುರುತಿಸಲಾಗಿದೆ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ನಿನ್ನೆ ಕೆಲಸ ಮುಗಿಸಿ ಹಾಲುವಾಗಿಲು ಬಳಿ ಹರಿಯುವ ನೀರು ನೋಡಲು ತೆರಳಿದ್ದರು.

ನಾಗೇಂದ್ರ ಹರಿಯುವ ನೀರಿನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಕಟ್ಟೆಗೆ ಬಿದ್ದಿದ್ದಾನೆ. ಕೂಡಲೇ ಸ್ನೇಹಿತನ ರಕ್ಷಣೆಗೆ ಮಂಜುನಾಥ್ ಮುಂದಾದರು ಸಾಧ್ಯವಾಗಿಲ್ಲ‌. ಅದೃಷ್ಟವಶಾತ್ ಮಂಜುನಾಥ್ ಅಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ರಾತ್ರಿ ಆಗಿರುವುದರಿಂದ ವಾಪಾಸ್ ಆಗಿದ್ದರು. ಇಂದು ಬೆಳಿಗ್ಗೆಯಿಂದ ನಾಗೇಂದ್ರ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ.

ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here