HomeGadag Newsಪ್ರಕೃತಿಯ ಉಳಿವಿಗೆ ಯುವಕರೇ ಶಕ್ತಿ: ಡಾ. ವಿ.ಟಿ. ನಾಯ್ಕರ್

ಪ್ರಕೃತಿಯ ಉಳಿವಿಗೆ ಯುವಕರೇ ಶಕ್ತಿ: ಡಾ. ವಿ.ಟಿ. ನಾಯ್ಕರ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವ ಪರಿಸರ ದಿನವು ಕೇವಲ ಆಚರಣೆಯ ದಿನವಲ್ಲ. ಮುಂದಿನ ಪೀಳಿಗೆಗಾಗಿ ಹಸಿರು ಮತ್ತು ಆರೋಗ್ಯಕರ ಭೂಮಿಯನ್ನು ಉಳಿಸುವ ಸಂಕಲ್ಪದ ದಿನವಾಗಿದೆ” ಎಂದು ನಗರದ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಪ್ರಾಚಾರ್ಯರು ಡಾ. ವಿ.ಟಿ. ನಾಯ್ಕರ್ ಅಭಿಪ್ರಾಯಪಟ್ಟರು.

ನಗರದ ಆದರ್ಶ ಶಿಕ್ಷಣ ಸಮಿತಿ ಅಧೀನದ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ಐಕ್ಯೂಎಸಿ, ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿದ ಡಾ. ನಾಯ್ಕರ್, ಪರಿಸರವು ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು, ಗಾಳಿ, ನೀರು, ಮಣ್ಣು, ಮರಗಳು ಹಾಗೂ ಜೀವಜಾಲಗಳು ಸೇರಿ ಪರಿಸರವನ್ನು ನಿರ್ಮಿಸುತ್ತವೆ ಎಂದು ಹೇಳಿದರು.

“ಪರಿಸರ ಮಾಲಿನ್ಯ, ಅರಣ್ಯ ನಾಶ, ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇಂದಿನ ಜಗತ್ತಿನ ಗಂಭೀರ ಸಮಸ್ಯೆಗಳಾಗಿವೆ. ಇಂತಹ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು,” ಎಂದು ಅವರು ಕರೆ ನೀಡಿದರು.

ಮೇರಾ ಯುವ ಭಾರತ್ ಜಿಲ್ಲಾ ಯುವ ಅಧಿಕಾರಿ ಶ್ರೀ ರಾಕೇಶ್ ರೆಡ್ಡಿ ಮಾತನಾಡಿ, “ಪರಿಸರ ಎಂದಾಗ ನಮಗೆ ಮೊದಲಾಗಿ ನೆನಪಾಗುವುದು ಸಾಲುಮರದ ತಿಮ್ಮಕ್ಕ. ಯಾವುದೇ ಸರ್ಕಾರಿ ನೆರವಿಲ್ಲದೆ ಸಾವಿರಾರು ಮರಗಳನ್ನು ಮಕ್ಕಳಂತೆ ಸಾಕಿ ಬೆಳೆಸಿದ ಅವರ ಜೀವನ ಯುವಕರಿಗೆ ಮಾದರಿಯಾಗಿದೆ,” ಎಂದು ಹೇಳಿದರು.

ಸಾಲುಮರದ ತಿಮ್ಮಕ್ಕ ಅವರ ಸೇವೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಒಬ್ಬ ವ್ಯಕ್ತಿಯ ಸಂಕಲ್ಪ ಸಮಾಜದ ಮೇಲೆ ಎಷ್ಟು ದೊಡ್ಡ ಪ್ರಭಾವ ಬೀರುತ್ತದೆ ಎಂಬುದಕ್ಕೆ ಅವರು ಜೀವಂತ ಉದಾಹರಣೆಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಬಿ.ಪಿ. ಜೈನರ, ಮೇರಾ ಯುವ ಭಾರತ್ ಕಾರ್ಯಕ್ರಮ ಸಂಯೋಜಕ ಶ್ರೀ ರವಿ ಹೊಂಬಾಳಿ, ಡಾ. ಸವಿತಾ ಬಂಡಾರ್ಕರ್, ಡಾ. ಸುನಿತಾ ನಾಯಕ್, ಪ್ರೊ. ಎಸ್.ಬಿ. ಜಾದವ್, ಪ್ರೊ. ಫಿರೋಜ್ ಖಾನ್, ಶ್ರೀ ಪ್ರಶಾಂತ್ ಹೊಂಬಾಳಿ, ಪ್ರೊ. ಸುನಿತಾ ತಿರ್ಲಾಪುರ, ಪ್ರೊ. ಮೋಹನ್ ಡಿ., ಶ್ರೀ ವಿ.ಎಲ್. ಕಲಬುರ್ಗಿ, ಶ್ರೀ ರವೀಶ್, ಶ್ರೀ ಬಡಿಗೇರ್, ಶ್ರೀಮತಿ ಸವಿತಾ ಇಬ್ಬನಿ, ಶ್ರೀಮತಿ ಪುರೋಹಿತ್, ಶ್ರೀಮತಿ ಭಾಗ್ಯಲಕ್ಷ್ಮಿ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿ ಪ್ರತಿನಿಧಿ ಕು. ಭರತ್ ಸ್ವಾಮಿ ಸೇರಿದಂತೆ ಸ್ವಯಂಸೇವಕರು ಉಪಸ್ಥಿತರಿದ್ದರು.

“ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಹೆಚ್ಚು ಗಿಡ ನೆಡಿ, ನೀರನ್ನು ಸಂರಕ್ಷಿಸಿ; ಪ್ರಕೃತಿಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.”

ಡಾ. ವಿ.ಟಿ. ನಾಯ್ಕರ್

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img