ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ನಗರದ ಪೆನ್ಷನ್ ಮೊಹಲ್ಲಾದಲ್ಲಿ ನಡೆದಿದೆ. ಪತಿಯೇ ನೀರಿನ ಸಂಪ್ ಗೆ ಮುಳುಗಿಸಿ ಪತ್ನಿ ಸಿಮ್ರಾನ್ (22) ಕೊಲೆ ಮಾಡಿದ್ದಾನೆ. ಸಿಮ್ರಾನ್ ಪತಿ ಫೈರೋಜ್ ವಿರುದ್ಧ ಕೊಲೆಯ ಆರೋಪ ಕೇಳಿ ಬಂದಿದೆ.
ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್-ಫೈರೋಜ್ ವಿವಾಹ ನಡೆದಿತ್ತು. ಮೂರೇ ತಿಂಗಳಲ್ಲಿ ನವ ವಧು ಸಾವನ್ನಪ್ಪಿದ್ದಕ್ಕೆ ಹಲವು ಅನುಮಾನಗಳು ಮೂಡುತ್ತಿವೆ. ಸದ್ಯ ಪೊಲೀಸರು ಸಿಮ್ರಾನ್ ಪತಿ ಫೈರೋಜ್, ಅತ್ತೆ, ಮಾವರನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಸ್ಪತ್ರೆಯ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



