ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
ಸೋಮವಾರ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಮಾರ್ಗವಾಗಿ ಗದಗ ಜಿಲ್ಲಾ ಕೇಂದ್ರಕ್ಕೆ ತೆರಳುತ್ತಿದ್ದಂತ ಶಿರಹಟ್ಟಿ ಸಿಪಿಐ ವಿಕಾಸ್ ಲಮಾಣಿ ಅವರು ಮಾರ್ಗ ಮಧ್ಯೆ ಬೈಕ್ ಸ್ಕಿಡ್ಡಾಗಿ ಬಿದ್ದು ರಕ್ತ ಸಿಕ್ತವಾಗಿ ನರಳಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಗೊಜನೂರು ಗ್ರಾಮದ ಬಳಿ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರನೊಬ್ಬ ರಸ್ತೆ ಪಕ್ಕದಲ್ಲಿ ಒದ್ದಾಡುತ್ತಿದ್ದ. ಇದನ್ನು ಗಮನಿಸಿದ ಸಿಪಿಐ ವಿಕಾಸ ಲಮಾಣಿ ತಮ್ಮ ವಾಹನದಲ್ಲಿ ಇದ್ದ ಫಸ್ಟ್ ಎಡ್ ನಿಂದ ಪ್ರಥಮ ಚಿಕಿತ್ಸೆ ನೀಡಿದರು. ಅಷ್ಟೇ ಅಲ್ಲ 108 ಆಂಬುಲೆನ್ಸ್ ಗೆ ಕರೆ ಮಾಡಿ ವಾಹನ ಬರುವವರೆಗೂ ಸ್ಥಳದಲ್ಲಿಯೇ ಇದ್ದು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದರು. ಗಾಯಗೊಂಡಾತನು ಲಕ್ಕುಂಡಿ ಗ್ರಾಮದ ಯುವಕ ಎನ್ನಲಾಗಿದೆ.
ಶಿರಹಟ್ಟಿ ಠಾಣೆಯ ಸಿಪಿಐ ವಿಕಾಸ್ ಲಮಾಣಿ ಅವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.