ಇಂದು ದೇಶಾದ್ಯಂತ ಕರಾಳ ದಿನ ಆಚರಣೆ!

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ರೈತರು ದೇಶಾದ್ಯಂತ ಕರಾಳ ದಿನ ಆಚರಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆ ವಿರೋದಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದು 6 ತಿಂಗಳು ಪೂರ್ಣವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರೈತರು ಇಂದು ಕರಾಳ ದಿನ ಆಚರಣೆ ಮಾಡಿದ್ದಾರೆ.

ರೈತರು ತಮ್ಮ ಮನೆ, ವಾಹನಗಳಲ್ಲಿ ಹಾಗೂ ಬೇರೆ ಸ್ಥಳಗಳಲ್ಲಿ ಕಪ್ಪು ಬಾವುಟ ಹಾರಿಸುತ್ತಿದ್ದಾರೆ. ಅಲ್ಲದೇ, ಇಂದು ಪಂಜಾಬ್ ನ ರೈತರು ಕಪ್ಪು ಬಣ್ಣದ ಟರ್ಬನ್‍ ಗಳನ್ನು ಧರಿಸುವುದರ ಮೂಲಕ ಕರಾಳ ದಿನ ಆಚರಿಸುತ್ತಿದ್ದಾರೆ.

ಈ ಹೋರಾಟ 2020ರ ನವೆಂಬರ್ 26ರಂದು ದೆಹಲಿ ಚಲೋ ಹೆಸರಿನಲ್ಲಿ ಪ್ರಾರಂಭವಾಯಿತು. ದೆಹಲಿ ಪ್ರವೇಶಕ್ಕೆ ಅನುಮತಿ ಸಿಗದ ಹಿನ್ನಲೆಯಲ್ಲಿ ಗಡಿಗಳಲ್ಲಿಯೇ ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ರೈತರು, ಅಂದಿನಿಂದ ಇಲ್ಲಿಯವರೆಗೂ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ಕೃಷಿ ಮಸೂದೆಗಳನ್ನು ಹಿಂಪಡೆಯುವವರೆಗೂ ಹೋರಾಟ ನಡೆಯಲಿದೆ ಎಂದು ರೈತರು ಎಚ್ಚರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here