

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಫಾರಂ 11ಬಿ ಮಾಡಿಸಲು 6000 ರೂಪಾಯಿ ಬೇಡಿಕೆ ಇಟ್ಟಿದ್ದ ಪಿಡಿಓ ಹಾಗೂ ಕಾರ್ಯದರ್ಶಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾ.ಪಂ.ನಲ್ಲಿ ಗುರುವಾರ ನಡೆದಿದೆ.
Advertisement
ಬಂಡಿಬಸಪ್ಪ ಕ್ಯಾಂಪ್ ನಿವಾಸಿ ವಿಜಯ ಕುಮಾರ್ ಅವರಿಂದ ಹಣ ಪಡೆಯುವ ವೇಳೆ ಎಸಿಬಿ ರೈಡ್ ನಡೆದಿದ್ದು, ಕೊಪ್ಪಳ ಎಸಿಬಿ ಎಸ್ಪಿ ಶ್ರೀಹರಿಬಾಬು ಮಾರ್ಗದರ್ಶನ ಹಾಗೂ ಶಿವಕುಮಾರ್ ನೇತೃತ್ವದಲ್ಲಿ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ ಶೇಖಸಾಬ್ ಹಾಗೂ ಕಾರ್ಯದರ್ಶಿ ನೂರ್ ಉಲ್ಲಕ್ ಅವರ
ಭ್ರಷ್ಟಾಚಾರ ಕುರಿತು ಎಸಿಬಿ ಅಧಿಕಾರಿಗಳು ತನಿಖೆ ನೆಡಸುತ್ತಿದ್ದಾರೆ.