ವಿಜಯಸಾಕ್ಷಿ ಸುದ್ದಿ,ಹಾಸನ: ಕೂದಲೆಳೆ ಅಂತರದಲ್ಲಿ ಬೈಕ್ ಸವಾರನೊಬ್ಬ ಕಾಡಾನೆಯಿಂದ ಪಾರಾದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ನಡೆದಿದೆ.
Advertisement
ಕಾಫಿತೋಟದಿಂದ ರಸ್ತೆಗೆ ದಿಢೀರ್ ಎಂಟ್ರಿಕೊಟ್ಟ ಒಂಟಿ ಸಲಗವನ್ನು ನೋಡದೇ ನೇರವಾಗಿ ಆನೆ ಸಮೀಪವೇ ಬೈಕ್ ಸವಾರ ಬಂದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಜನರ ಕೂಗಾಟಕ್ಕೆ ಎಚ್ಚೆತ್ತ ಬೈಕ್ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ.
ಈ ಭಾಗದಲ್ಲಿ ಹಲವು ದಿನಗಳಿಂದ ಈ ಒಂಟಿ ಸಲಗ ಸಂಚರಿಸುತ್ತಿದೆ. ಈವರೆಗೆ ಈ ಆನೆಯಿಂದ ಯಾರಿಗೂ ತೊಂದರೆ ಆಗದಿದ್ದರೂ ಕಾಡಾನೆ ಸಂಚಾರದಿಂದ ಜನರಲ್ಲಿ ಭೀತಿ ಹೆಚ್ಚಾಗಿದೆ. ಹೀಗ ರಸ್ತೆ, ಗ್ರಾಮ ಎನ್ನದೇ ಎಲ್ಲೆಂದರಲ್ಲಿ ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿರೋ ಕಾಡಾನೆಯನ್ನು ಸ್ಥಳಾಂತರ ಮಾಡುವಂತೆ ಜನರು ಒತ್ತಾಯ ಮಾಡುತ್ತಿದ್ದಾರೆ.