HomeIndia Newsಕೇಂದ್ರದ ತಾರತಮ್ಯ; ಮಾಜಿ ಸಿ ಎಮ್ ಎಚ್ಡಿಕೆ ಆಕ್ರೋಶ

ಕೇಂದ್ರದ ತಾರತಮ್ಯ; ಮಾಜಿ ಸಿ ಎಮ್ ಎಚ್ಡಿಕೆ ಆಕ್ರೋಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕನ್ನಡಿಗರೇನು ತಬ್ಬಲಿಗಳಾ? ಕನ್ನಡಿಗರು ಏನು ಅನ್ಯಾಯ ಮಾಡಿದ್ದಾರೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕನ್ನಡಿಗರೇನು ತಬ್ಬಲಿ ಮಕ್ಕಳೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ನಿತ್ಯ 1200 ಮೆಟ್ರಿಕ್ ಟನ್(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 120 ಮೆಟ್ರಿಕ್ ಟನ್ ನಷ್ಟು ಕಳಹಿಸುತ್ತಿದೆ. ಆದರೆ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅಥವಾ ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಎಂದು ಗುಡುಗಿದ್ದಾರೆ.

ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದು ಕಿಡಿಕಾರಿದ್ದಾರೆ.

ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆ ಹೊರುವರೇ? ಎಂದು ಪ್ರಶ್ನಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!