ವಿಜಯಸಾಕ್ಷಿ ಸುದ್ದಿ, ಮೈಸೂರು
ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ ನ ಅಟ್ಟಹಾಸ ಶುರುವಾಗಿದೆ. ಸದ್ಯ ಮೊದಲ ಬಲಿಯನ್ನು ಕೂಡ ಈ ಫಂಗಸ್ ಪಡೆದಿದೆ. ಕೊರೊನಾ ವಾರಿಯರ್ಸ್ ಗಳನ್ನು ಬಲಿ ಪಡೆದಿದೆ. ಮಹಾನಗರ ಪಾಲಿಕೆಯ ಗುತ್ತಿಗೆ ನೌಕರ ವಿನೋದ್ ಹಾಗೂ ಕೋವಿಡ್ ಮೃತ ದೇಹ ಸಾಗಿಸುತ್ತಿದ್ದ ಆಂಬುಲೇನ್ಸ್ ಚಾಲಕ ರವಿ ಬಲಿಯಾಗಿದ್ದಾರೆ.
ಕಳೆದ ಹದಿನಾರು ದಿನಗಳ ಹಿಂದೆ ರವಿ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ನೊಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾಲಿಕೆ ನೌಕರ ವಿನೋದ್ ಅವರು ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನಗಳ ಹಿಂದೆ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ.