HomeGadag Newsಮುಂದುವರೆದ ಕೊರೋನಾ ಆರ್ಭಟ; ಶನಿವಾರ 37 ಜನರಿಗೆ ಸೋಂಕು

ಮುಂದುವರೆದ ಕೊರೋನಾ ಆರ್ಭಟ; ಶನಿವಾರ 37 ಜನರಿಗೆ ಸೋಂಕು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಎಪ್ರಿಲ್ 17 ಶನಿವಾರ ಜಿಲ್ಲೆಯಲ್ಲಿ 37 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗದಗ ನಗರದಲ್ಲಿಯೇ ಅತಿ ಹೆಚ್ಚು ಅಂದರೆ 23 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಗರ ಪ್ರದೇಶದಲ್ಲಿ ಸೋಂಕು ತನ್ನ ತೀವ್ರತೆ ಹೆಚ್ಚು ಮಾಡಿದೆ. ಮುಂಡರಗಿಯ 02, ನರಗುಂದದ 03, ರೋಣ ತಾಲೂಕಿನಲ್ಲಿ-04, ಹಾಗೂ ಶಿರಹಟ್ಟಿ ತಾಲೂಕಿನ-05 ಜನರಿಗೆ ಸೋಂಕು ತಗುಲಿದೆ.

ಶನಿವಾರ 37 ಜನರಿಗೆ ಸೋಂಕು ತಗುಲುವ ಮೂಲಕ ಗದಗ ಜಿಲ್ಲೆಯಲ್ಲಿ ಇದುವರೆಗೂ 11541 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್ ನಿಂದ 141 ಜನರು ಮೃತಪಟ್ಟಿದ್ದಾರೆ. ಇಂದು 19 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಇದುವರೆಗೂ 11207 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 193 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 180 ಜನರ ವರದಿ ಬರಲು ಬಾಕಿ ಇದ್ದು, ಇದುವರೆಗೂ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 318286 ಮಾದರಿಗಳಲ್ಲಿ 306565 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!