ಕೊರೋನಾ ಸೋಂಕು ಹೆಚ್ಚಳ; ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೋವಿಡ್-19 ಸಾಂಕ್ರಾಮಿಕ ರೋಗವು ರಾಜ್ಯದಾದ್ಯಂತ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರುವುದನ್ನು ತಡಗಟ್ಟಲು ಹಾಗೂ ಸಾರ್ವಜನಿಕರಿಗೆ ಈ ಸಾಂಕ್ರಾಮಿಕ ರೋಗವು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ 2021 ರ ಎಪ್ರಿಲ್ ಮಾಹೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸ್ಥಗಿತಗೊಳಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.

ಸರಕಾರದ ಸುತ್ತೋಲೆಯನ್ವಯ ಗದಗ ಜಿಲ್ಲೆಯಲ್ಲಿ ಏಪ್ರಿಲ್ 17 ರಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here