ವಿಜಯಸಾಕ್ಷಿ ಸುದ್ದಿ, ಹಾವೇರಿ
ಮಹಾಮಾರಿಗೆ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಬಲಿಯಾಗಿರುವ ಘಟನೆ ನಡೆದಿದೆ. ಅನಿತಾ (43) ಕೋವಿಡ್ ಗೆ ಬಲಿಯಾದ ತಾಲೂಕು ಅಧಿಕಾರಿಯಾಗಿದ್ದಾರೆ. ಮೃತ ಅನಿತಾ ಅವರು ತಾಲೂಕಿನ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅನಿತಾ ಅವರು ಕಳೆದ ಕೆಲವು ದಿನಗಳಿಂದ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿಯೇ ಸಾವನ್ನಪ್ಪಿದ್ದಾರೆ. ಇವರು ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ ಮಾಹಿತಿ ನೀಡಿದ್ದಾರೆ.



