- ವಿಜಯನಗರದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಹೇಳಿಕೆ
ವಿಜಯಸಾಕ್ಷಿ ಸುದ್ದಿ, ವಿಜಯನಗರ
ಆನಂದಸಿಂಗ್ ದೊಡ್ಡ ಖಾತೆಗೆ ಬೇಡಿಕೆ ಇಟ್ಟಿರುವುದು ಅವರ ವೈಯಕ್ತಿಕ ವಿಚಾರ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.
ಹೊಸಪೇಟೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ನನ್ನ ಆತ್ಮೀಯ ಸ್ನೇಹಿತರು. ಈ ಭಾಗದ ಪ್ರಭಾವಿ ನಾಯಕರೂ ಸಹ. ಪ್ರಬಲ ಖಾತೆಗೆ ಪಟ್ಟು ಹಿಡಿದಿರುವುದು ಅವರ ವೈಯಕ್ತಿಕ ವಿಚಾರ.
ಯಾವುದೇ ಖಾತೆ ಕೊಟ್ಟರೂ ನಿಭಾಯಿಸಹಬಹುದು. ಸರ್ಕಾರದ ಕಾರ್ಯಕ್ರಮ ಜನರಿಗೆ ತಲುಪಿಸವಲ್ಲಿ ಯಶಸ್ವಿಯಾಗಿ ಕೆಲಸ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಕಳೆದ ಮೂರು ವರ್ಷಗಳಿಂದ ಯಡಿಯೂರಪ್ಪ ಅವರ ಸರ್ಕಾರ ಮತ್ತು ಈಗಿನ ಬೊಮ್ಮಾಯಿಯವರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
ಕೊರೊನಾ ವಿಚಾರದಲ್ಲಿ ಕನಿಷ್ಠ ಸಹಾಯ ಮಾಡಲೂ ಕೂಡ ಆಗುತ್ತಿಲ್ಲ ಎಂದು ಆರೋಪಿಸಿದ ಸಂತೋಷ ಲಾಡ್, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೊರೊನಾ ಸಮಯದಲ್ಲಿ ಜನತೆಯ ಜತೆಗಿದ್ದೇವೆ. ಜನ ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಗೆ ಜನ ಕೈ ಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.
ಬಿಜೆಪಿಯ ಕಾರ್ಯಕ್ರಮಗಳು ಕೇವಲ ಪೇಪರ್ ನಲ್ಲಿ ಮಾತ್ರ ಅನುಷ್ಠಾನಗೊಳ್ಳುತ್ತಿವೆ. ವಿಜಯನಗರ ಜಿಲ್ಲೆ ರಚನೆ ಮಾಡಿದ ನಂತರ ಒಬ್ಬ ವಿಶೇಷ ಅಧಿಕಾರಿ ನೇಮಕ ಮಾಡಿರುವುದನ್ನು ಬಿಟ್ಟರೆ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬರಲಿ, ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ಬಾಂಬೆ ಬಾಯ್ಸ್ ನ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರ ಕುರಿತು ಪ್ರತಿಕ್ರಿಸಿದ ಅವರು, ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಂತೋಷ ಲಾಡ್ ಹೇಳಿದರು.