HomeGadag Newsಗದಗ ಜಿಲ್ಲೆಯಲ್ಲಿ ಗುರುವಾರ 132 ಜನರಿಗೆ ಸೋಂಕು; 87 ಜನ ಗುಣಮುಖ

ಗದಗ ಜಿಲ್ಲೆಯಲ್ಲಿ ಗುರುವಾರ 132 ಜನರಿಗೆ ಸೋಂಕು; 87 ಜನ ಗುಣಮುಖ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಏಪ್ರಿಲ್‌ 29 ಗುರುವಾರ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಕೊರೋನಾ ಸೋಂಕು ಸ್ಫೋಟಗೊಂಡಿದೆ. 132 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ವ್ಯಾಪಕವಾಗತೊಡಗಿದೆ.

ಇಂದಿನ 132 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12580 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -55 , ಮುಂಡರಗಿ-28, ನರಗುಂದ-03, ರೋಣ-32, ಶಿರಹಟ್ಟಿ-08, ಹೊರಜಿಲ್ಲೆಯ-06 ಸೇರಿದಂತೆ 132 ಪ್ರಕರಣಗಳು ದೃಢಪಟ್ಟಿವೆ.

ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 87 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 11744 ಜನರು ‌ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 695 ಪ್ರಕರಣಗಳು ಸಕ್ರಿಯವಾಗಿದ್ದು, 576 ಜನರು ಮನೆಯಲ್ಲಿ, 119 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 200 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 340710 ಮಾದರಿಗಳಲ್ಲಿ 327930 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!