ಗದಗ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅವಾಂತರ

0
Spread the love

  • ನರಗುಂದ ತಾಲೂಕಿನ ವಾಸನ ಗ್ರಾಮದಲ್ಲಿ ಕುಸಿದ ಮೇಲ್ಛಾವಣಿ

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದರೂ ನಂತರದ ಅವಾಂತರಗಳು ಮುಂದುವರಿದಿವೆ. ನರಗುಂದ ತಾಲೂಕಿ‌ನ ವಾಸನ ಗ್ರಾಮದಲ್ಲಿ ರಾತ್ರಿ ಮನೆಯ ಮೇಲ್ಛಾವಣಿ ಕುಸಿದಿದ್ದು, ಅದೃಷ್ಡವಶಾತ್ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದೆಡೆ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಬೆಣ್ಣೆಹಳ್ಳ ದಾಟುವ ವೇಳೆ ನೀರಿನ ರಭಸಕ್ಕೆ ಲಾರಿಯೊಂದು ಜರಿದು ಹಳ್ಳದತ್ತ ವಾಲಿದೆ. ಪ್ರಾಣಹಾನಿ ಸಂಭವಿಸಿಲ್ಲ.

ಸತತವಾಗಿ ಸುರಿದ ಮಳೆಯಿಂದ ರಾತ್ರಿ ವೇಳೆ ಮನೆಯ ಮೇಲ್ಛಾವಣಿ ಕುಸಿದಿದೆ. ಮನೆಯೊಳಗೆ ನಿದ್ರಿಸುತ್ತಿದ್ದ ತಾಯಿ-ಮಗಳು ಅದೃಷ್ಟವಶಾತ್ ಸುರಕ್ಷಿತವಾಗಿದ್ದಾರೆ.

ಕಳೆದ ವರ್ಷ ಪ್ರವಾಹಕ್ಕೆ ವಾಸನ ಗ್ರಾಮ ತುತ್ತಾಗಿತ್ತು. ಮನೆ ಹಾನಿಗೆ ಸೂಕ್ತವಾದ ಪರಿಹಾರ ನೀಡುವಂತೆ ಸ್ಥಳೀಯರು ಮನವಿ‌ ಮಾಡಿದ್ದಾರೆ.

ಬೆಣ್ಣೆಹಳ್ಳದಲ್ಲಿ ವಾಲಿದ ಲಾರಿ

ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಬೆಣ್ಣೆಹಳ್ಳ ದಾಟುತ್ತಿದ್ದ ವೇಳೆ ನೀರಿನ ರಭಸಕ್ಕೆ ಲಾರಿ ಹಳ್ಳಕ್ಕೆ ವಾಲಿದೆ.
ಲಾರಿಯು ನರಗುಂದ ದಿಂದ ರೋಣ ಪಟ್ಟಣಕ್ಕೆ ಹೊರಟಿತ್ತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


Spread the love

LEAVE A REPLY

Please enter your comment!
Please enter your name here