ವಿಜಯಸಾಕ್ಷಿ ಸುದ್ದಿ, ಗದಗ
Advertisement
ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಅವರ ಮೇಲೆ ನಡೆದ ಐಡಿ ದಾಳಿಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿಯಲ್ಲಿ ಇರುವ ನಾಯಕರೆಲ್ಲ ಪರಿಶುದ್ಧವಾದವರಾ ? ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರನ್ನು ಹೆದರಿಸಲು ನಡೆಸಿದ ಷಡ್ಯಂತ್ರ ಇದು ಎಂದು ಗದಗ ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಸಂಯೋಜಕ ರಾಜು ಪೆಂಡಾರ್ ಆರೋಪಿಸಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಮನೆ ಮೇಲಿನ ಇಡಿ ದಾಳಿ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೈವಾಡ ಇದೆ. ಕೆಲವು ದಿನಗಳ ಹಿಂದೆ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಅವರು ಉತ್ತರ ಸಹ ನೀಡಿದ್ದರು.
ಆದರೂ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಬೇಕಂತಲೇ ಮಾಡಿಸಿದ ಐಡಿ ದಾಳಿ ಇದು ಎಂದು ಪೆಂಡಾರ್ ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಕ್ಕಳ ಮಾಡಿದ ಭ್ರಷ್ಟಾಚಾರ ಕಣ್ಣಿಗೆ ಕಾಣಿಸಲಿಲ್ಲವೇ ಇವರಿಗೆ ಎಂದವರು ಪ್ರಶ್ನಿಸಿದ್ದಾರೆ.