HomeCrime Newsಜಿಲ್ಲೆಗೆ ಎಂಟ್ರಿ ಕೊಟ್ಟ ರೆಮ್ಡಿಸಿವರ್ ಕರಾಳ ದಂಧೆ; ನಾಲ್ಕು ಜನ ಅರೆಸ್ಟ್

ಜಿಲ್ಲೆಗೆ ಎಂಟ್ರಿ ಕೊಟ್ಟ ರೆಮ್ಡಿಸಿವರ್ ಕರಾಳ ದಂಧೆ; ನಾಲ್ಕು ಜನ ಅರೆಸ್ಟ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ರೆಮ್ಡಿಸಿವರ್ ನ್ನು ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಿಲ್ಲಾ ಸೈಬರ್ ವಿಭಾಗದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ. ಸದ್ಯ ನಾಲ್ವರ ಬಂಧನವಾಗಿದ್ದು, ಇನ್ನೊಬ್ಬ ಮಹಿಳಾ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆಸ್ಪತ್ರೆಯ ನರ್ಸ್, ಜಿಮ್ಸ್ ನ ಲ್ಯಾಬ್ ಟೆಕ್ನಿಷಿಯನ್, ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಈ ಆರೋಪಿಗಳು ರೂ. 3 ಸಾವಿರದ ಔಷಧವನ್ನು ರೂ. 30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಎಸ್ಪಿ ಹೇಳಿದ್ದಾರೆ.

ಮಹ್ಮದ್ ಇಸ್ಮಾಯಿಲ್ ಓದೇಕಾರ, ಪಿರೋಜ್ ಖಾನ್ ಪಠಾಣ, ಜಿಮ್ಸ್ ನ ಲ್ಯಾಬ್ ಟೆಕ್ನಿಷಿಯನ್ ಗವಿಸಿದ್ದಯ್ಯ ಹಿರೇಮಠ, ರಮೇಶ ಚವಟಗಿ, ನರ್ಸ್ ಜ್ಯೋತಿ ಲಮಾಣಿ ಆರೋಪಿತರು. ಸದ್ಯ ನಾಲ್ವರ ಬಂಧನವಾಗಿದ್ದು, ಜ್ಯೋತಿ ಲಮಾಣಿ ಅವರ ಬಂಧನವಾಗಬೇಕಿದೆ.

ಜೀವ ರಕ್ಷಕ ಇಂಜೆಕ್ಷನ್ ಔಷಧಿಯನ್ನು ಇವರು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ಗುಪ್ತ ಮಾಹಿತಿ ಸಂಗ್ರಹಿಸಲಾಗಿತ್ತು. ಸೈಬರ್ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ಟಿ ಅವರ ನೇತೃತ್ವದ ತಂಡ, ಗದಗ – ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಹತ್ತಿರ ನಿಗದಿತ ಬೆಲೆಗಿಂತ ಹೆಚ್ಚು ಅಂದರೆ ರೂ. 30 ಸಾವಿರಕ್ಕೆ ಮಾರಾಟ ಮಾಡುತ್ತಿರುವ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಇನ್ನೂ ಮೂವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.

ಸದ್ಯ ಅವರಿಗಾಗಿ ಹುಡುಕಾಟ ನಡೆದಿದೆ. ಬಂಧಿತ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 409, 420 ಸಹ ಕಲಂ- 34, ಐಪಿಸಿ ಮತ್ತು ಕಲಂ – 4,5,6 ಮತ್ತು 13, ಡ್ರಗ್ಸ್ ಕಂಟ್ರೋಲ್ ಕಾಯ್ದೆ -1950ರ ಅಡಿ ಪ್ರಕರಣ ದಾಖಲಾಸಿಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತರಿಂದ ವಶಪಡಿಸಿಕೊಂಡಿರುವ 14 ರೆಮಿಡಿಸಿವರ್ ನ ಸರ್ಕಾರ ನಿಗದಿಪಡಿಸಿದ ಮೌಲ್ಯ ರೂ. 48,860 ಇದೆ. ಆದರೆ, ಆರೋಪಿತರು ರೂ. 30 ಸಾವಿರದಂತೆ ರೂ. 4,20,000ನ ಲೆಕ್ಕಾಚಾರದಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಸದ್ಯ ಬಂಧಿತರಿಂದ ರೂ. 2,500 ನಗದ ಹಾಗೂ 4 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಈ ಪ್ರಕರಣದ ತನಿಖೆಯನ್ನು ಗದಗ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ ಮುಂದುವರೆಸಲಿದ್ದಾರೆ ಎಂದು ಎಸ್ಪಿ ಯತೀಶ್ ಎನ್ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!