HomeGadag Newsಜೂನ್ 14 ರಿಂದ 21 ರವರೆಗೆ ನಿಷೇಧಾಜ್ಞೆ, ನೈಟ್‌, ವೀಕೆಂಡ್ ಕರ್ಫ್ಯೂ ಜಾರಿ, ಕೆಲ ಮಾರ್ಗಸೂಚಿಗಳಲ್ಲಿ...

ಜೂನ್ 14 ರಿಂದ 21 ರವರೆಗೆ ನಿಷೇಧಾಜ್ಞೆ, ನೈಟ್‌, ವೀಕೆಂಡ್ ಕರ್ಫ್ಯೂ ಜಾರಿ, ಕೆಲ ಮಾರ್ಗಸೂಚಿಗಳಲ್ಲಿ ಸಡಿಲಿಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸೋಂಕು ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲು ಮಾಡಿ ಆದೇಶ ಹೊರಡಿಸಿರುತ್ತದೆ. ಈ ಮಾರ್ಗಸೂಚಿಗಳು ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ  ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ. ಅದೇ ರೀತಿ ಅಗತ್ಯ ವಸ್ತು, ಮದ್ಯ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 10 ಗಂಟೆಯ ವರಗೆ ಪಾರ್ಕ್ ಗಳನ್ನು ತೆರೆಯಬಹುದು. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ.
ಪ್ರತಿದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಪ್ರತಿಬಂಧಕಾಜ್ಞೆ ಜಾರಿ

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ  ರೋಗ ಕಾಯ್ದೆ 1897  ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ  ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ  ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು  ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 14 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ  ಪ್ರತಿಬಂಧಕಾಜ್ಞೆಯನ್ನು ಜೂನ್ 21 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100  ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!