ವಿಜಯಸಾಕ್ಷಿ ಸುದ್ದಿ, ಕೋಲ್ಕತ್ತಾ
ಸದ್ಯ ಐದು ರಾಜ್ಯಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ಕಾರ್ಯ ಪ್ರಗತಿಯಲ್ಲಿದೆ. ಆದರೆ, ಇಡೀ ದೇಶದ ಜನರ ಕಣ್ಣು ಪಶ್ಚಿಮ ಬಂಗಾಳದ ನಂದಿಗ್ರಾಮದ ಮೇಲಿದೆ. ಏಕೆಂದರೆ ಸಿಎಂ ಮಮತಾ ಬ್ಯಾನರ್ಜಿ ಅವರು ಅಲ್ಲಿ ಸ್ಪರ್ಧೆ ಮಾಡಿದ್ದಾರೆ. ಅಷ್ಟೇ ಅಲ್ಲ ದೀದಿ ತಮ್ಮ ಆಪ್ತನ ವಿರುದ್ಧ ಸ್ಪರ್ಧೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಹಾಗೂ ಅವರ ಮಾಜಿ ಆಪ್ತ ಸುವೇಂದು ಅಧಿಕಾರಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಹೀಗಾಗಿ ಅವರ ವಿರುದ್ಧವೇ ದೀದಿ ಸ್ಪರ್ಧೆ ಮಾಡಿದ್ದಾರೆ.
ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲುತ್ತಾರೆ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೂಡ ಸೋಲುತ್ತಾರೆ ಎಂದು ಬಿಜೆಪಿ ಚುನಾವಣಾ ಪ್ರಚಾರ ಮಾಡಿತ್ತು. ಮಮತಾ ಬ್ಯಾನರ್ಜಿ ಮಾತ್ರ ಯಾವುದೇ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡದೆ ಕೇವಲ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ್ದರು.
ಈ ಕ್ಷೇತ್ರದಲ್ಲಿ ಈ ಹಿಂದೆ ಸುವೇಂದು ಅಧಿಕಾರಿ ತಂದೆ ಶಾಸಕರಾಗಿದ್ದರು. ಈಗ ಸತತ ಮೂರು ಬಾರಿ ಸುವೇಂದು ಅಧಿಕಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಹಜವಾಗಿ ಈ ಕ್ಷೇತ್ರದ ಮೇಲೆ ಸುವೇಂದು ಅಧಿಕಾರಿಯ ಪ್ರಭಾವವೇ ಜಾಸ್ತಿಯಿದೆ. ಆದರೂ ದೀದಿ ತಮ್ಮ ಹಠ ಬಿಡಲಿಲ್ಲ.