ನ್ಯಾಯಾಧೀಶರ ವಿರುದ್ಧ ಮಾತನಾಡಿರುವ ಸಿ.ಟಿ. ರವಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಹೇಳಿಕೆ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಸಿ.ಟಿ. ರವಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಭಟನೆ ವ್ಯಕ್ತವಾಗಿದೆ.

ಸಿ.ಟಿ. ರವಿ ಅವರು ಇತ್ತೀಚೆಗೆ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ, ನಗರದಲ್ಲಿನ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಬಳಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಸಿಟಿ ರವಿ ಅವರ ವಿರುದ್ಧ ಪಾಲಿಕೆ ಸದಸ್ಯ ಲೋಕೇಶ್ ಪಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಒಬ್ಬ ನ್ಯಾಯಾಧೀಶರ ವಿರುದ್ಧ ಇಂತಹ ಹೇಳಿಕೆ ನೀಡುವುದು ತಪ್ಪು. ನ್ಯಾಯಾಧೀಶರನ್ನು ಲೇವಡಿ ಮಾಡಿರುವ ಸಿ.ಟಿ. ರವಿ ಅವರ ವಿರುದ್ಧ ಕ್ರಮ ಜರುಗಿಸಬೇಕು. ನ್ಯಾಯಾಧೀಶರು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹೇಳಿರುವ ಮಾತನ್ನು ಸಿ.ಟಿ. ರವಿ ಅಲ್ಲಗಳೆದು ಈ ರೀತಿ ಮಾತನಾಡಿದ್ದು, ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬ ಗೌರವಯುತ ನ್ಯಾಯಾಧೀಶರ ಬಗ್ಗೆ ಈ ರೀತಿಯ ಹೇಳಿಕೆಗಳನ್ನು ನೀಡುವುದು ತಪ್ಪು. ಈ ರೀತಿಯ ಹೇಳಿಕೆಗಳನ್ನು ನೀಡಿರುವ ಸಿ.ಟಿ. ರವಿ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here