Homekoppalಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಪ್ರತಿಭಟನೆ

ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಪ್ರತಿಭಟನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಕಾರಟಗಿ:
ಸಾಮಾಜಿಕವಾಗಿ ರಾಜ್ಯದಲ್ಲಿ ದೊಡ್ಡ ಸಮುದಾಯವನ್ನೇ ಹೊಂದಿರುವ ಲಿಂಗಾಯತ ಪಂಚಮಸಾಲಿ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪಂಚಮಸಾಲಿ ಸಮುದಾಯದ‌ವರನ್ನು 2A ವರ್ಗಕ್ಕೆ ಸೇರಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ತಕ್ಷಣವೇ ಪಂಚಮಸಾಲಿ ಸಮಾಜವನ್ನು ಸರಕಾರ 2ಎ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಬುಧವಾರ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಪಂಚಮಸಾಲಿ ‌ಸಮಾಜದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಸುಂಕದ್ ಮಾಜಿ ಸಿಎಂ ಬಿಎಸ್ವೈ ಮಾತು ಕೊಟ್ಟು ತಪ್ಪಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಮಾತು ತಪ್ಪಿದರೆ ಮುಂದಿನ ದಿನಮಾನಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.

ಮುಖಂಡ ಪರಮೇಶಗೌಡ ಕೊಂತನೂರ್ ಮಾತನಾಡಿ, ಲಿಂಗಾಯತ ಪಂಚಮಸಾಲಿ ಸಮುದಾಯಗಳ ಮತಗಳನ್ನು ಪಡೆದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬರುವ ಮುಂಚೆ ಬಿಜೆಪಿ ಮಾತು ಕೊಟ್ಟಿತ್ತು.‌ ಆದರೆ ಇದೀಗ ಮಾತು ಉಳಿಸಿಕೊಳ್ಳುತ್ತಿಲ್ಲ. ಇದು ಸರಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡ ಕೊತ್ವಾಲ್ ಶರಣಪ್ಪ ಸೇರಿದಂತೆ ಮತ್ತಿತರರು ಇದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img