ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿ.ಕೆ.ಶಿ.

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಯನ್ನ ಕಾಂಗ್ರೆಸ್ ಸ್ವಾಗತಿಸುತ್ತದೆ. ಭಗವದ್ಗೀತೆ ನಮ್ಮ ದೇಶದ ಅಸ್ಮೀತೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

Advertisement

ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೇ ಕಾಂಗ್ರೆಸ್.
ದೂರದರ್ಶನದ ಮೂಲಕ ಭಗವದ್ಗೀತೆಯನ್ನ ಪ್ರಚಾರ ಮಾಡಿದ್ದು ನಮ್ಮ ಪಕ್ಷ. ಇದರ ಜೊತೆಗೆ ‌ದೇಶದ ಎಲ್ಲಾ ಧರ್ಮವನ್ನ ಕಾಂಗ್ರೆಸ್ ಗೌರವಿಸಿತ್ತದೆ ಎಂದು ಡಿಕೆಶಿ ಹೇಳಿದರು.

ನಮ್ಮ ನಿರೀಕ್ಷೆಯಷ್ಟು ಡಿಜಿಟಲ್ ಸದಸ್ಯತ್ವ ಮಾಡಿಸುತ್ತೇವೆ. ಇನ್ನೂ 7 ದಿನ ಸಮಯ ಇದೆ. ನಾವು ನಿರೀಕ್ಷೆ ರೀಚ್ ಮಾಡುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here