ಪೆಟ್ರೋಲ್ ಟ್ಯಾಂಕರ್ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವು!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಪೆಟ್ರೋಲ್ ಟ್ಯಾಂಕರ್ ವಾಹನ ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಹುಬ್ಬಳ್ಳಿ ರಸ್ತೆಯ ಜಿಲ್ಲಾಡಳಿತ ಭವನದ ಎದುರಿಗೆ ಈ ದುರ್ಘಟನೆ ನಡೆದಿದೆ.

ಮೃತನನ್ನು ಒಕ್ಕಲಗೇರಿ ಓಣಿಯ ಮಹಾದೇವಪ್ಪ ಹುಚ್ಚಪ್ಪ ಕುಂಬಾರ ಎಂದು ಗುರುತಿಸಲಾಗಿದೆ. ಈ ಟ್ಯಾಂಕರ್ ಕೊಪ್ಪಳ ಮಾರ್ಗವಾಗಿ ಹೊರಟಿತ್ತು.

ಘಟನೆಯ ಮಾಹಿತಿ ತಿಳಿದ ಜಿಲ್ಲಾವರಿಷ್ಠಾಧಿಕಾರಿ ಯತೀಶ್ ಎನ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಸೈಕಲ್ ಮೇಲೆ ಕಟ್ಟಿಗೆ ಒಯ್ಯುತ್ತಿದ್ದ ವ್ಯಕ್ತಿಯು ಮನೆ ಕಡೆ ಹೊರಟಿದ್ದಾಗ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅವಘಡ ನಡೆದಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here