ವಿಜಯಸಾಕ್ಷಿ ಸುದ್ದಿ, ನವದೆಹಲಿ
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ವಿಚಾರ ಬಹಳ ಸದ್ದು ಮಾಡುತ್ತಿರುವ ಕಾರಣಕ್ಕೆ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಭೇಟಿ ನೀಡಿದ್ದಾರೆ. ಅದಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಪ್ರಧಾನಿ ಮೋದಿ ಅವರು ದೆಹಲಿಯ ತಮ್ಮ ನಿವಾಸಕ್ಕೆ ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕೆಲ ಸಚಿವರ, ಶಾಸಕರ ಅಸಮಾಧಾನ, ನಾಯಕತ್ವ ಬದಲಾವಣೆ ಮಟ್ಟದಲ್ಲಿನ ಚರ್ಚೆ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಅರುಣ್ ಸಿಂಗ್ ಅವರು ಇಂದು ಮಧ್ಯಾಹ್ನ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನವೇ ಡಿವಿಎಸ್ ರಿಂದ ಪ್ರಧಾನಿ ಮೋದಿ ಭೇಟಿಯಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಭೇಟಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ತರಬಹುದು ಎಂದು ಹೇಳಲಾಗುತ್ತಿದೆ.