ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಲಾಕ್ ಡೌನ್ ಸಂದರ್ಭದಲ್ಲಿ ಫುಡ್ ಕಿಟ್ ವಿತರಣೆಯ ನೆಪದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಫುಡ್ ಕಿಟ್ ಹಂಚುವ ನೆಪದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಮಕ್ಕಳ ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಾಸ್ಕ್ ಧರಿಸದೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ನಿಯಮಕ್ಕೆ ಕಾಸಿನ ಕಿಮ್ಮತ್ತು ನೀಡಿಲ್ಲ. ಸಾಮಾಜಿಕ ಅಂತರಕ್ಕೂ ಯಾವುದೇ ಬೆಲೆ ನೀಡಿಲ್ಲ. ಸ್ವತಃ ಲಾಡ್ ಮಾಸ್ಕ್ ಧರಿಸದೆ ಭಾಗವಹಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಕ್ಕಳು ಸೇರಿದಂತೆ ಸಾವಿರಾರು ಜನ ಸಾರ್ವಜನಿಕರನ್ನು ಸೇರಿಸಿ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಈಗನಿಂದಲೇ ಚುನಾವಣೆ ಪ್ರಚಾರ ಆರಂಭಿಸಿರುವ ಲಾಡ್ ಕಳೆದ ಮೂರು ನಾಲ್ಕು ದಿನಗಳಿಂದ ಕಲಘಟಗಿ ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದು, ಲಾಡ್ ವಿರುದ್ದ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕಿದೆ ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.