ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ವ್ಯಕ್ತಿಗೆ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರಿಗೇ ಅವಾಜ್

0
Spread the love

ವಿಜಯಸಾಕ್ಷಿ ಸುದ್ದಿ, ಯಾದಗಿರಿ

Advertisement

ರಾಜ್ಯದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವು ಮೇ. 10ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಜನ ಮಾತ್ರ ಬೇಕಾಬಿಟ್ಟಿಯಾಗಿ ತಿರುಗಾಡುವುದು ತಪ್ಪುತ್ತಿಲ್ಲ.

ನಗರದಲ್ಲಿ ವ್ಯಕ್ತಿಯೊಬ್ಬ ಬೇಕಾಬಿಟ್ಟಿ ತಿರುಗಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬೈಕ್ ಸೀಜ್ ಮಾಡಿದ್ದಕ್ಕೆ ಶಾಸಕರ ಹೆಸರು ಹೇಳಿ, ಪಿಎಸ್‍ ಐಗೆ ನಡು ರಸ್ತೆಯಲ್ಲಿಯೇ ಅವಾಜ್ ಹಾಕಿದ್ದಾನೆ.

ಈ ಘಟನೆ ಇಲ್ಲಿಯ ಡಿಗ್ರಿ ಕಾಲೇಜು ವೃತ್ತದಲ್ಲಿ ನಡೆದಿದೆ. ಲಾಕ್ ಡೌನ್ ನಿಯಮ ಉಲ್ಲಂಘಸಿ ಸಂಚಾರ ಮಾಡುತ್ತಿದ್ದವರ ಬೈಕ್ ಗಳನ್ನು ಪೊಲೀಸ್ ಸಿಬ್ಬಂದಿ ಸೀಜ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಓರ್ವ ಬೈಕ್ ಸವಾರ, ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

ಆದರೆ, ಇಷ್ಟಕ್ಕೆ ಸುಮ್ಮನಾಗದ ಬೈಕ್ ಸವಾರ, ಯಾದಗಿರಿ ಶಾಸಕರ ಹೆಸರು ಹೇಳಿ ಆವಾಜ್ ಹಾಕಿದ್ದಾನೆ. ಶಾಸಕರಿಗೆ ಹೇಳುತ್ತೇನೆ ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಈ ಸಂದರ್ಭದಲ್ಲಿ ಬೈಕ್ ಸವಾರರು ಪರಸ್ಪರ ಬೈದಾಡಿಕೊಂಡಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here