ವಿಜಯಸಾಕ್ಷಿ ಸುದ್ದಿ, ತೆಲಂಗಾಣ
Advertisement
ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿದ ಪ್ರಕರಣದಲ್ಲಿ ಮಾಜಿ ಶಾಸಕರೊಬ್ಬರಿಗೆ ಪ್ರಜಾ ಪ್ರತಿನಿಧಿ ನ್ಯಾಯಾಲಯ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.
ಮಾಜಿ ಶಾಸಕ ಪಾಯಂ ವೆಂಕಟೇಶ್ವರಲು ಶಿಕ್ಷೆಗೆ ಗುರಿಯಾದ ಶಾಸಕ.
2018ರ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರ ಪಿನಪಾಕ ಚುನಾವಣೆಯ ವೇಳೆ ಪಾಯಂ ವೆಂಕಟೇಶ್ವರಲು ವೋಟಿಗಾಗಿ ಮತದಾರರಿಗೆ ಹಣ ಹಂಚಿದ್ದ ಆರೋಪ ಕೇಳಿಬಂದಿತ್ತು.
ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೆಲಂಗಾಣ ಪ್ರಜಾ ಪ್ರತಿನಿಧಿ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.