ಮರಕ್ಕೆ ಕಾರು ಡಿಕ್ಕಿ; ಯುವಕರಿಬ್ಬರ ದುರ್ಮರಣ

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ

Advertisement

ಕಾರು ರಸ್ತೆ ಬದಿಯ ಗೂಟದ ಕಲ್ಲಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ್ದರಿಂದ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ವಿನಾಯಕ‌ ಚಿದಾನಂದ ಕಾವೇರಿ (22) ಮುತ್ತು ಮಾಳಿ (22) ಮೃತ ಯುವಕರು. ಈರಯ್ಯ ಹಿರೇಮಠ (22) ಸ್ಥಿತಿ ಗಂಭೀರವಾಗಿದ್ದು, ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಥಣಿ ಪಟ್ಟಣದ ಈರಯ್ಯ ಅವರ ತಾಯಿಯನ್ನು ಧಾರವಾಡಕ್ಕೆ ಬಿಟ್ಟು ಬರುವಾಗ ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮುಂದಿನ ಸೀಟಿನಲ್ಲಿ ಕುಳಿತ ಚಾಲಕ ಹಾಗೂ ಮತ್ತೋರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಹಿಂದೆ ಕುಳಿತ ಇಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here