ಮಾಗಡಿ ಜಿ. ಪಂ. ಕ್ಷೇತ್ರದಿಂದ ಪುತ್ರ ಕಣಕ್ಕೆ; ಗೆಲ್ಲಿಸಲು ಶಾಸಕ ರಾಮಣ್ಣ ಲಮಾಣಿ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

Advertisement

ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಶಿರಹಟ್ಟಿ ತಾಲೂಕಿನ ಮಾಗಡಿ ಕ್ಷೇತ್ರದಿಂದ ಪುತ್ರ ಮಹೇಶ್ ಲಮಾಣಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಮಹೇಶ್ ನಿಗೆ ಆಶೀರ್ವದಿಸಬೇಕೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ಶುಕ್ರವಾರ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಪೂಜೆ ನೆರವೇರಿಸಿ ಗ್ರಾಮಪಂಚಾಯಿತಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾನು ಕೂಡ ಮಾಗಡಿ ಜಿಲ್ಲಾ ಪಂಚಾಯತಿ ಕ್ಷೇತ್ರದಿಂದ ಆಯ್ಕೆಯಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರ ಫಲವಾಗಿ ಎಲ್ಲ ಮುಖಂಡರು ನನ್ನನ್ನು ಒಮ್ಮತದಿಂದ ಶಾಸಕನಾಗಿ ಸತತವಾಗಿ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಆದ್ದರಿಂದ ಈ ಬಾರಿ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪುತ್ರ ಮಹೇಶ್ ಲಮಾಣಿ ಅವರನ್ನು ಸಹ ಜಿಲ್ಲಾ ಪಂಚಾಯತಿ ಸದಸ್ಯನಾಗಿ ಆಯ್ಕೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಹ ಆಯ್ಕೆ ಮಾಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಮಾಗಡಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here