ಮೃತರ ದರ್ಶನಕ್ಕೆ, 9ನೇ ದಿನದ ಕಾರ್ಯಕ್ಕೆ ಆಗಮಿಸಿದ ವಾನರ!

0
Spread the love

ವಿಜಯಸಾಕ್ಷಿ ಸುದ್ದಿ, ಕಂಪ್ಲಿ

Advertisement

ಮೃತರ ಅಂತಿಮ ದರ್ಶನಕ್ಕೆ ಆಗಮಿಸಿದ ವಾನರವೊಂದು, 9ನೇ ದಿನದ ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೂ ತುಂಗಭದ್ರಾ ನದಿ ತೀರಕ್ಕೆ ಆಗಮಿಸುವ ಮೂಲಕ ಕುಟುಂಬ ಸದಸ್ಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ.

ಕಂಪ್ಲಿ ತಾಲೂಕಿನ ಸಣಾಪುರ ಗ್ರಾ.ಪಂ. ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್‌ನಲ್ಲಿ ಜೂ. 30ರಂದು ವಿಶ್ವನಾಥರಾಜು (70) ಮೃತರಾಗಿದ್ದರು. ಪಾರ್ಥಿವ ಶರೀರದ ಮುಂದೆ ಕುಟುಂಬದ ಸದಸ್ಯರು ರೋದಿಸುತ್ತಾ ಕುಳಿತಿರುವಾಗಲೇ ಬೃಹತ್ ಕರಿಕೋತಿಯೊಂದು (ವಾನರ) ಆಗಮಿಸಿ, ಶವದ ಮೇಲೆ ಹಾಕಿದ್ದ ವಸ್ತ್ರವನ್ನು ಸರಿಸಿ, ಮುತ್ತು ಕೊಟ್ಟು, ಮೃತರ ತಲೆಯ ಮೇಲೆ ತನ್ನ ಕೈಇಟ್ಟು, ಬಳಿಕ ತೆರಳಿತ್ತು.

9ನೇ ದಿನ ಮೃತರ ಅಸ್ಥಿ ವಿಸರ್ಜನೆ ಕಾರ್ಯಕ್ರಮವನ್ನು ಕುಟುಂಬಸ್ಥರು ತುಂಗಭದ್ರಾ ನದಿ ತೀರದಲ್ಲಿ ನೆರವೇರಿಸುತ್ತಿದ್ದರು. ಅಲ್ಲಿಗೂ ಬಂದ ವಾನರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಕುಟುಂಬಸ್ಥರು ನೀಡಿದ ಆಹಾರ ಸೇವಿಸಿ ನಿರ್ಗಮಿಸಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.


Spread the love

LEAVE A REPLY

Please enter your comment!
Please enter your name here