
ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಇಲ್ಲಿನ ಕಲ್ಯಾಣ ನಗರ ನಿವಾಸಿ, ರಜಿಯಾಬೇಗಂ ಕುಷ್ಟಗಿ (76) ಅಲ್ಪಕಾಲದ ಅನಾರೋಗ್ಯದಿಂದ ಇಂದು (ಫೆ.8) ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
Advertisement
ಪತಿ, ನಿವೃತ್ತ ಶಿಕ್ಷಕ ಎಂ.ಡಿ.ಹುಸೇನ್ ಕುಷ್ಟಗಿ, ಮಗ ಸಜ್ಜಾದ ಹುಸೇನ್ ಸೇರಿದಂತೆ ಒಟ್ಟು ಐವರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸಂಜೆ 5 ಗಂಟೆಗೆ ಕಿನ್ನಾಳ ರಸ್ತೆಯ ಖಬರ್ಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.