ರಾಜೀನಾಮೆಗೆ ಮುಂದಾದ್ರಾ ಆನಂದಸಿಂಗ್ ?

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಬೇಡಿಕೆ ಕುರಿತು ಸಿಎಂ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ತೀರ್ಮಾನ ನಿಂತಿದೆ. ಆದರೆ ನಾನು ಹೆಚ್ಚು ದಿನ ಕಾಯಲ್ಲ, ಕುಟುಂಬದವರ ಜೊತೆ ಹಾಗೂ ಆಪ್ತರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಸಿಎಂ ಭೇಟಿಯ ನಂತರ
ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಯಡಿಯೂರಪ್ಪ ಸಿಎಂ ಆಗಿದ್ದರೆ ಏನೂ ಕೇಳುತ್ತಿರಲಿಲ್ಲ. ಆದರೆ ಈಗ ನಾಯಕತ್ವ ಬದಲಾಗಿದೆ. ಹಾಗಾಗಿ ನಾವೂ ಬದಲಾವಣೆ ಬಯಸುತ್ತಿದ್ದೇವೆ. ನನ್ನ ಬೇಡಿಕೆ, ಮುಂದಿನ ನಡೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ಬೇಡಿಕೆ ಏನೆಂದು ಬಹಿರಂಗ ಪಡಿಸಲಾಗದು ಎಂದು ಹೇಳಿದರು.

ಸಿಎಂ ಹುದ್ದೆ ಸುಲಭದ ಮಾತಲ್ಲ. ಮುಳ್ಳಿನ ಹಾಸಿಗೆ ಇದ್ದಂತೆ ಎಂಬುದು ನಂಗೂ ಗೊತ್ತು ಎಂದಿದ್ದಾರೆ. ಕೇಳಿದ ಖಾತೆ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಮುಂದುವರೆಯುವುದಾಗಿ ಆನಂದ್ ಸಿಂಗ್ ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here