ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ದೇಶದಲ್ಲಿ ಈಗಾಗಲೇ ಕೊರೊನಾ ಎರಡನೇ ಅಲೆ ಸಾಷ್ಟು ಸಾವು- ನೋವು ಸೃಷ್ಟಿ ಮಾಡಿದೆ. ಸದ್ಯ ಮೂರನೇ ಅಲೆಯ ಭಯ ಶುರುವಾಗಿದೆ. ಕೇಂದ್ರ ಸರ್ಕಾರದ ಪ್ರಮುಖ ವೈದ್ಯಕೀಯ ಸಲಹೆಗಾರರು ಸದ್ಯ ಈ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಮೂರನೇ ಅಲೆಯ ಭಯಾನಕತೆ ಕುರಿತು ಸಂಶೋಧನೆಗಳು ನಡೆಯುತ್ತಿವೆ.
ಒಂದು ಸಮೀಕ್ಷೆಯಂತೆ ಅಕ್ಟೋಬರ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತಕ್ಕೆ ಕೊರೊನಾ ವೈರಸ್ ನ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಶೇ. 85ರಷ್ಟು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಲವು ತಜ್ಞರು ಆಗಷ್ಟ್ ನಿಂದ ಸೆಪ್ಟೆಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೂರನೆಯ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂಬ ಅಭಿಪ್ರಾಯ ತಜ್ಞರದ್ದಾಗಿದೆ. ಹೀಗಾಗಿ ಹಲವು ತಜ್ಞರು 18 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್ ಹಾಕದ ಕಾರಣಕ್ಕೆ ಅವರು ಸಾಕಷ್ಟು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ವೈರಸ್ ನ ಮೂರನೇ ಅಲೆಯ ಪ್ರಭಾವ ವಯಸ್ಕರಿಗೆ ಹೋಲಿಸಿದರೆ, ಮಕ್ಕಳ ಮೇಲೆ ತುಂಬಾ ಕಡಿಮೆ ಇರಲಿದೆ ಎಂದಿದೆ.



