ಹಣ ಲೂಟಿ ಮಾಡಲು ಈ ಪ್ಯಾಕೇಜ್ ಘೋಷಿಸಲಾಗಿದೆ – ಕುಮಾರಸ್ವಾಮಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಸರ್ಕಾರ ಅರೆಕಾಸಿನ ಮಜ್ಜಿಗೆ ಕೊಟ್ಟಂತೆ ಪ್ಯಾಕೇಜ್ ಘೋಷಿಸಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ರೂ. 1,250 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಅದು ಯಾವುದಕ್ಕೂ ಪ್ರಯೋಜನವಿಲ್ಲ. ಜನರ ದುಡ್ಡನ್ನು ಲೂಟಿ ಹೊಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ನಿರಾಶಾದಾಯಕ ಪ್ಯಾಕೇಜ್. ಹೂವಿನ ಬೆಳೆಗಾರರಿಗೆ ಘೋಷಣೆ ಮಾಡಿರುವ ಪ್ಯಾಕೇಜ್ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಕೂಲಿ, ಬೀಜದ ಬೆಲೆ ಏರಿಕೆ ಆಗಿರುವಾಗ ಈ ಸಹಾಯ ಅವರಿಗೆ ಯಾವುದಕ್ಕೆ ಪ್ರಯೋಜನವಾಗಲಿದೆ. ಆಟೋ, ಕ್ಯಾಬ್ ಡ್ರೈವರ್ ಗಳಿಗೆ ಈ ಹಣ ಸಾಕಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರು, ಚಮ್ಮಾರರು, ಕಮ್ಮಾರಿಗೆ ಕೊಟ್ಟ ಹಣ ಯಾವುದಕ್ಕೂ ಸಾಕಾಗುವುದಿಲ್ಲ. 10 ಕೆಜಿ ಅಕ್ಕಿ ಕೂಡಾ ಸಾಕಾಗೊಲ್ಲ. ಇದು ರಾಜ್ಯ ಸರ್ಕಾರದ ನಾಟಕ. ಈ ಪ್ಯಾಕೇಜ್ ಯಾವುದಕ್ಕೂ ಪ್ರಯೋಜನ ಇಲ್ಲ ಎಂದು ಹೆಚ್ಡಿಕೆ ಜರಿದಿದ್ದಾರೆ.


Spread the love

LEAVE A REPLY

Please enter your comment!
Please enter your name here