ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಹಬ್ಬಗಳು ಇರೋದ್ರಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಮುಂದೂಡಿದ್ದಾರೆ. ಹಬ್ಬಗಳು ಮುಗಿದ ಬಳಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನವನಿಹಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಂದೆ ನಿಂತು ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಲಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದರು.
ಆರ್ ಎಸ್ ಎಸ್ ನ್ನು ತಾಲಿಬಾನ್ ಗೆ ಹೋಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಕಾರಜೋಳ, ಪ್ರಚಾರಕ್ಕಾಗಿ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು. ಅವರು ಸಿಎಂ ಆಗಿದ್ದವರು, ಸಾಕಷ್ಟು ಅನುಭವವಿದೆ. ಜನಪ್ರತಿನಿಧಿಗಳು ಎಲ್ಲರಿಗೂ ಆದರ್ಶವಾಗಿರಬೇಕು ಎಂದು ಕಿವಿಮಾತು ಹೇಳಿದರು.
ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಲು ಚಿತ್ರಮಂದಿರ ಓಪನ್ ಮಾಡಲಾಗಿದೆ. ಮಾಲೀಕರು ಕೋವಿಡ್ ನಿಯಮ ಉಲ್ಲಂಘಿಸಬಾರದು ಎಂದು ಸಲಹೆ ನೀಡಿದರು.