ವಿಜಯಸಾಕ್ಷಿ ಸುದ್ದಿ, ನವದೆಹಲಿ
Advertisement
ಯಡಿಯೂರಪ್ಪ ಇಲ್ಲದೇ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಯಾಕೆ ಮಾಡಲು ಹೊರಟಿದೆ? ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ಸಿಎಂ ಯಡಿಯೂರಪ್ಪ ಬದಲಾವಣೆಗೆ ರಾಜ್ಯದ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕ ಅವರ ಪರ ಬ್ಯಾಟ್ ಬೀಸಿರಿವುದು ಬಿಎಸ್ ವೈ ಗೆ ಆನೆ ಬಲ ಬಂದಂತಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರೇ ಯಡಿಯೂರಪ್ಪ. ಅವರು ಬೇರೆ ನಾಯಕರಿಗೆ ಚಮಚಾ ಆಗದೇ ಕಾರ್ಯನಿರ್ವಹಿಸುತ್ತಿರುವುದರಿಂದ ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ್ಯವನ್ನು ಕೆಲವರು ನಡೆಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.